ಮೇ 18ಕ್ಕೆ ಬಸವಾದಿ ಶರಣರ ಭಕ್ತರ ಹಿಂದೂ ಸಮಾಜೋತ್ಸವ ಮುಂದೂಡಿಕೆ

ಶಹಾಪುರ: ಇಲ್ಲಿನ ಬಸವಾದಿ ಶರಣರ ಭಕ್ತರ ಹಿಂದೂ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕಾರ್ಯಕ್ರಮದ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ ಮೊದಲು ಏಪ್ರಿಲ್ 29ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಈಗ ಮೇ 18ಕ್ಕೆ ಮುಂದೂಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಮಾಜದಲ್ಲಿ ಬಸವಾದಿ ಶರಣರ ತತ್ವಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕೆಂದು ಸಮಿತಿ ಮನವಿ ಮಾಡಿದೆ.

– ಆರಾಧ್ಯ ವಾಣಿ ಡಿಜಿಟಲ್ ಡೆಸ್ಕ್.

Leave a Reply

Your email address will not be published. Required fields are marked *